---Advertisement---

Advertisement

ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಸೋಮವಾರ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.ಚನ್ನಮ್ಮ ಸರ್ಕಲ್ ದಿಂದ ಆರಂಭವಾಗಿ ಕಾಲೇಜು ರಸ್ತೆ, ರಾಮಲಿಂಗಖಿಂಡಗಲ್ಲಿ, ಶನಿ ಮಂದಿರ, ಕಪಿಲೇಶ್ವರ, ಶಿವಾಜಿ ಉದ್ಯಾನ, ಮಾಲಿನಿ ಸಿಟಿ ಮಾರ್ಗವಾಗಿ ಭವ್ಯ ರೋಡ್ ಶೋ ನಡೆಯಲಿದೆ. ಆದ್ದರಿಂದ ಪೊಲೀಸರು ಈ ಮಾರ್ಗದಲ್ಲಿ ಸಂಚಾರ ನಿರ್ಬಂಧಿಸಿದ್ದಾರೆ. ರಸ್ತೆಯ ಎರಡು ಬದಿಗೆ ಬ್ಯಾರಿಕೇಡ್ ಹಾಕಿ ಸಂಚಾರ ನಿಲ್ಲಿಸಲಾಗಿದೆ. ಇದು ಪ್ರಮುಖವಾಗಿ ವಿದ್ಯಾರ್ಥಿಗಳನ್ನು ಚಿಂತೆಗೀಡು ಮಾಡುವಂತಾಗಿದೆ. ಜೊತೆಗೆ ಸೋಮವಾರದಿಂದ ಹಲವು ಶಾಲಾ- ಕಾಲೇಜುಗಳಿಗೆ ಪರೀಕ್ಷೆ ನಡೆಯುತ್ತಿರುವುದರಿಂದ ವಿದ್ಯಾರ್ಥಿಗಳು ಮುಂದೇನು ಮಾಡುವುದು ಎಂದು ಚಿಂತೆಗೊಳಗಾಗಿದ್ದಾರೆ.

By BPN

Leave a Reply

Your email address will not be published. Required fields are marked *